9:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿ. ಎಲ್. ಸಂತೋಷ್ ಮೊದಲು ಬಿಜೆಪಿ ಶಾಸಕರನ್ನು ಉಳಿಸಿಕೊಳ್ಳಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ

01/09/2023, 18:54

ಹುಬ್ಬಳ್ಳಿ(reporterkarnataka.com): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಮೊದಲು ತಮ್ಮಶಾಸಕರನ್ನು ಉಳಿಸಿಕೊಳ್ಳಲಿ, ಮತ್ತೆ ಬೇರೆ ಪಕ್ಷದ 45 ಮಂದಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಸಂತೋಷ್ ಹೇಳಿಕೆಗೆ ಮಾಧ್ಯವದವರಿಗೆ
ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.
ಸಂತೋಷ್ ನಾಳೆಯೇ ಆಪರೇಶನ್ ಕಮಲ ನಡೆಸಲಿ, ಎಷ್ಟು ಕಾಂಗ್ರೆಸ್ ನಾಯಕರನ್ನು ಅವರು ಸೆಳೆಯುತ್ತಾರೋ ನೋಡಿಬಿಡೋಣ ಎಂದು ಹಳೆಯ ಬಿಜೆಪಿಗರಾದ ಶೆಟ್ಟರ್ ಸವಾಲೆಸೆದರು.
ಕಾಂಗ್ರೆಸ್ ಪಕ್ಷದ್ದು 135 ಶಾಸಕರನ್ನೊಳಗೊಂಡ ಗಟ್ಟಿಮುಟ್ಟಾದ ಸರಕಾರ, ಇಂಥ ಸರಕಾರವನ್ನು ಯಾರು ತಾನೆ ಬಿಟ್ಟು ಹೋಗುವುದು ಸಾಧ್ಯ? ಎಂದು ಹೇಳಿದ ಶೆಟ್ಟರ್, ರಾಜ್ಯದಲ್ಲಿ ಬಿಜೆಪಿ ಒಂದು ಮುಳುಗುವ ಹಡಗಿನ ಸ್ಥಿತಿಯಲ್ಲಿದೆ, ಸಂತೋಷ್ ತಮ್ಮ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು