6:24 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬಿ. ಎಲ್. ಸಂತೋಷ್ ಮೊದಲು ಬಿಜೆಪಿ ಶಾಸಕರನ್ನು ಉಳಿಸಿಕೊಳ್ಳಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ

01/09/2023, 18:54

ಹುಬ್ಬಳ್ಳಿ(reporterkarnataka.com): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಮೊದಲು ತಮ್ಮಶಾಸಕರನ್ನು ಉಳಿಸಿಕೊಳ್ಳಲಿ, ಮತ್ತೆ ಬೇರೆ ಪಕ್ಷದ 45 ಮಂದಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಸಂತೋಷ್ ಹೇಳಿಕೆಗೆ ಮಾಧ್ಯವದವರಿಗೆ
ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.
ಸಂತೋಷ್ ನಾಳೆಯೇ ಆಪರೇಶನ್ ಕಮಲ ನಡೆಸಲಿ, ಎಷ್ಟು ಕಾಂಗ್ರೆಸ್ ನಾಯಕರನ್ನು ಅವರು ಸೆಳೆಯುತ್ತಾರೋ ನೋಡಿಬಿಡೋಣ ಎಂದು ಹಳೆಯ ಬಿಜೆಪಿಗರಾದ ಶೆಟ್ಟರ್ ಸವಾಲೆಸೆದರು.
ಕಾಂಗ್ರೆಸ್ ಪಕ್ಷದ್ದು 135 ಶಾಸಕರನ್ನೊಳಗೊಂಡ ಗಟ್ಟಿಮುಟ್ಟಾದ ಸರಕಾರ, ಇಂಥ ಸರಕಾರವನ್ನು ಯಾರು ತಾನೆ ಬಿಟ್ಟು ಹೋಗುವುದು ಸಾಧ್ಯ? ಎಂದು ಹೇಳಿದ ಶೆಟ್ಟರ್, ರಾಜ್ಯದಲ್ಲಿ ಬಿಜೆಪಿ ಒಂದು ಮುಳುಗುವ ಹಡಗಿನ ಸ್ಥಿತಿಯಲ್ಲಿದೆ, ಸಂತೋಷ್ ತಮ್ಮ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು