3:04 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ

17/07/2025, 14:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರುವ ಕೆಲಸವನ್ನು ಬಿಟ್ಟು ಹಾಡ ಹಗಲೇ ಚಿನ್ನಾಭರಣ ಮಳಿಗೆಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಮಾಲೀಕರ ಗಮನ ಬೇರೆಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಯುವಕನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ನೆಹರು ನಗರ ನಿವಾಸಿ ರಿಚರ್ಡ್ (25) ಬಂಧಿತ ಆರೋಪಿಯಾಗಿದ್ದು, ಹಣದಾಸೆಗೆ ಅಪರಾಧ ಪ್ರಕರಣಗಳಲ್ಲಿ ರಿಚಾರ್ಡ್ ಭಾಗಿಯಾಗುತ್ತಿದ್ದ ಎನ್ನಲಾಗಿದ್ದು ಬಂಧಿತನಿಂದ 13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲೇಶ್ವರಂ ನ ಜನನಿಬಿಡ ಸಂಪಿಗೆ ರಸ್ತೆ ಯಲ್ಲಿನ ಕನಿಷ್ಕಾ ಜ್ಯುವೆಲರಿ ಶಾಪ್ ನಲ್ಲಿ ಚಿನ್ನದ ಸರ ಖರೀದಿ ನೆಪದಲ್ಲಿ ಬೇರೆ ಬೇರೆ ಡಿಸೈನ್ ತೋರಿಸವಂತೆ ಹೇಳಿ ಮೂರು ಸರ ಕಳುವು ಮಾಡಿ ಪರಾರಿಯಾಗಿದ್ದ, ಇದೇ ರೀತಿ ಬ್ಯಾತಾರಾಯಪುರ ದಲ್ಲೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇರುವ ಕೆಲಸ ಬಿಟ್ಟು ಪೂರ್ಣವದಿ ಕಳ್ಳತನಕ್ಕೆ ಇಳಿದಿದ್ದ ರಿಚರ್ಡ್ ಪತ್ತೆಗೆ ಬಲೆ ಬೀಸಿದ್ದು, ಈತ ವಾಸವಿದ್ದ ವೈಟ್ ಫೀಲ್ಡ್ ಪಿಜಿ ನಲ್ಲಿ ಬಂಧಿಸಲಾಗಿದೆ. ಈತನ ಮೇಲೆ ಮೈಸೂರು, ಮಂಗಳೂರು, ಕೇರಳ ಸೇರಿದಂತೆ ಒಟ್ಟು 9 ಪ್ರಕರಣ ಈತನ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು