9:19 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ

17/07/2025, 14:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರುವ ಕೆಲಸವನ್ನು ಬಿಟ್ಟು ಹಾಡ ಹಗಲೇ ಚಿನ್ನಾಭರಣ ಮಳಿಗೆಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಮಾಲೀಕರ ಗಮನ ಬೇರೆಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಯುವಕನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ನೆಹರು ನಗರ ನಿವಾಸಿ ರಿಚರ್ಡ್ (25) ಬಂಧಿತ ಆರೋಪಿಯಾಗಿದ್ದು, ಹಣದಾಸೆಗೆ ಅಪರಾಧ ಪ್ರಕರಣಗಳಲ್ಲಿ ರಿಚಾರ್ಡ್ ಭಾಗಿಯಾಗುತ್ತಿದ್ದ ಎನ್ನಲಾಗಿದ್ದು ಬಂಧಿತನಿಂದ 13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲೇಶ್ವರಂ ನ ಜನನಿಬಿಡ ಸಂಪಿಗೆ ರಸ್ತೆ ಯಲ್ಲಿನ ಕನಿಷ್ಕಾ ಜ್ಯುವೆಲರಿ ಶಾಪ್ ನಲ್ಲಿ ಚಿನ್ನದ ಸರ ಖರೀದಿ ನೆಪದಲ್ಲಿ ಬೇರೆ ಬೇರೆ ಡಿಸೈನ್ ತೋರಿಸವಂತೆ ಹೇಳಿ ಮೂರು ಸರ ಕಳುವು ಮಾಡಿ ಪರಾರಿಯಾಗಿದ್ದ, ಇದೇ ರೀತಿ ಬ್ಯಾತಾರಾಯಪುರ ದಲ್ಲೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇರುವ ಕೆಲಸ ಬಿಟ್ಟು ಪೂರ್ಣವದಿ ಕಳ್ಳತನಕ್ಕೆ ಇಳಿದಿದ್ದ ರಿಚರ್ಡ್ ಪತ್ತೆಗೆ ಬಲೆ ಬೀಸಿದ್ದು, ಈತ ವಾಸವಿದ್ದ ವೈಟ್ ಫೀಲ್ಡ್ ಪಿಜಿ ನಲ್ಲಿ ಬಂಧಿಸಲಾಗಿದೆ. ಈತನ ಮೇಲೆ ಮೈಸೂರು, ಮಂಗಳೂರು, ಕೇರಳ ಸೇರಿದಂತೆ ಒಟ್ಟು 9 ಪ್ರಕರಣ ಈತನ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು