6:29 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ

17/07/2025, 14:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರುವ ಕೆಲಸವನ್ನು ಬಿಟ್ಟು ಹಾಡ ಹಗಲೇ ಚಿನ್ನಾಭರಣ ಮಳಿಗೆಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಮಾಲೀಕರ ಗಮನ ಬೇರೆಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಯುವಕನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ನೆಹರು ನಗರ ನಿವಾಸಿ ರಿಚರ್ಡ್ (25) ಬಂಧಿತ ಆರೋಪಿಯಾಗಿದ್ದು, ಹಣದಾಸೆಗೆ ಅಪರಾಧ ಪ್ರಕರಣಗಳಲ್ಲಿ ರಿಚಾರ್ಡ್ ಭಾಗಿಯಾಗುತ್ತಿದ್ದ ಎನ್ನಲಾಗಿದ್ದು ಬಂಧಿತನಿಂದ 13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲೇಶ್ವರಂ ನ ಜನನಿಬಿಡ ಸಂಪಿಗೆ ರಸ್ತೆ ಯಲ್ಲಿನ ಕನಿಷ್ಕಾ ಜ್ಯುವೆಲರಿ ಶಾಪ್ ನಲ್ಲಿ ಚಿನ್ನದ ಸರ ಖರೀದಿ ನೆಪದಲ್ಲಿ ಬೇರೆ ಬೇರೆ ಡಿಸೈನ್ ತೋರಿಸವಂತೆ ಹೇಳಿ ಮೂರು ಸರ ಕಳುವು ಮಾಡಿ ಪರಾರಿಯಾಗಿದ್ದ, ಇದೇ ರೀತಿ ಬ್ಯಾತಾರಾಯಪುರ ದಲ್ಲೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇರುವ ಕೆಲಸ ಬಿಟ್ಟು ಪೂರ್ಣವದಿ ಕಳ್ಳತನಕ್ಕೆ ಇಳಿದಿದ್ದ ರಿಚರ್ಡ್ ಪತ್ತೆಗೆ ಬಲೆ ಬೀಸಿದ್ದು, ಈತ ವಾಸವಿದ್ದ ವೈಟ್ ಫೀಲ್ಡ್ ಪಿಜಿ ನಲ್ಲಿ ಬಂಧಿಸಲಾಗಿದೆ. ಈತನ ಮೇಲೆ ಮೈಸೂರು, ಮಂಗಳೂರು, ಕೇರಳ ಸೇರಿದಂತೆ ಒಟ್ಟು 9 ಪ್ರಕರಣ ಈತನ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು