9:15 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬಾ.. ಅಂದ್ರೆ ಓಡೋಡಿ ಹತ್ತಿರ ಬರುತ್ತೆ, ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ!!: ಇದು ಮುದ್ದಾದ ಮರಿ ಕಾಡಾನೆ ಕತೆ!

31/07/2023, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾ ಅಂದ್ರೆ ಓಡೋಡಿ ಹತ್ತಿರ ಬರುತ್ತೆ. ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ. ಇದು ಮುದ್ದಾದ ಮರಿ ಕಾಡಾನೆಯ ಕತೆ.
ಇದು ತಾಯಿಯ ಗುಂಪಿನಿಂದ ತಪ್ಪಿಸಿಕೊಂಡು ಒಂಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ-ಬೇಲೂರು ರಸ್ತೆಯ ಚೀಕನಹಳ್ಳಿ ಬಳಿ ಈ ಘಟನೆ ನಡೆದಿದೆ. ಪುಟ್ಟ…ಪುಟ್ಟ… ಹೆಜ್ಜೆ ಇಟ್ಕೊಂಡು ಇದು ಅಮ್ಮನಿಗಾಗಿ ಪರಿತಪ್ಪಿಸ್ತಿದೆ. ದಿಕ್ಕುತೋಚದೆ ಕಾಫಿತೋಟದಲ್ಲಿ ಅತ್ತಿಂದಿತ್ತ ಓಡಾಡ್ತಿದೆ. ಜನರು ಕರೆದ ಕೂಡಲೇ ಹತ್ತಿರ ಬರುತ್ತದೆ. ಹೋಗು ಅಂದ್ರೆ ಹಿಂದಕ್ಕೆ ಹೋಗುತ್ತದೆ. ಮಕ್ಕಳಂತೆ ಹೇಳಿದ ಮಾತು ಕೇಳುತ್ತದೆ.


ಗುಂಪಿನಿಂದ ಬೇರ್ಪಟ್ಟ ಮರಿಯನ್ನ ಆನೆಗಳ ಗುಂಪು ಹತ್ತಿರ ಸೇರಿಸಲ್ಲ. ನೀರು ಕೊಟ್ಟಿ,ಮರಿ ಆನೆಯನ್ನ ಅರಣ್ಯ ಅಧಿಕಾರಿಗಳು ಸಂತೈಸಿದ್ದಾರೆ. ಆನೆಯನ್ನು ಅದರ ಅಮ್ಮ ಬಳಿ ಸೇರಿಸಲು ಅರಣ್ಯ ಅಧಿಕಾರಿಗಳ ಪರದಾಡುತ್ತಿದ್ದಾರೆ. ಮೂಡಿಗೆರೆ-ಸಕಲೇಶಪುರ ಗಡಿಯಲ್ಲಿ ಬೀಡುಬಿಟ್ಟಿರೋ ಕಾಡಾನೆಗಳ ತಂಡದ ಮರಿ ಇರಬಹುದು ಎಂದು ಅಧಿಕಾರಿಗಳಿಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು