4:30 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಾ.. ಅಂದ್ರೆ ಓಡೋಡಿ ಹತ್ತಿರ ಬರುತ್ತೆ, ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ!!: ಇದು ಮುದ್ದಾದ ಮರಿ ಕಾಡಾನೆ ಕತೆ!

31/07/2023, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾ ಅಂದ್ರೆ ಓಡೋಡಿ ಹತ್ತಿರ ಬರುತ್ತೆ. ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ. ಇದು ಮುದ್ದಾದ ಮರಿ ಕಾಡಾನೆಯ ಕತೆ.
ಇದು ತಾಯಿಯ ಗುಂಪಿನಿಂದ ತಪ್ಪಿಸಿಕೊಂಡು ಒಂಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ-ಬೇಲೂರು ರಸ್ತೆಯ ಚೀಕನಹಳ್ಳಿ ಬಳಿ ಈ ಘಟನೆ ನಡೆದಿದೆ. ಪುಟ್ಟ…ಪುಟ್ಟ… ಹೆಜ್ಜೆ ಇಟ್ಕೊಂಡು ಇದು ಅಮ್ಮನಿಗಾಗಿ ಪರಿತಪ್ಪಿಸ್ತಿದೆ. ದಿಕ್ಕುತೋಚದೆ ಕಾಫಿತೋಟದಲ್ಲಿ ಅತ್ತಿಂದಿತ್ತ ಓಡಾಡ್ತಿದೆ. ಜನರು ಕರೆದ ಕೂಡಲೇ ಹತ್ತಿರ ಬರುತ್ತದೆ. ಹೋಗು ಅಂದ್ರೆ ಹಿಂದಕ್ಕೆ ಹೋಗುತ್ತದೆ. ಮಕ್ಕಳಂತೆ ಹೇಳಿದ ಮಾತು ಕೇಳುತ್ತದೆ.


ಗುಂಪಿನಿಂದ ಬೇರ್ಪಟ್ಟ ಮರಿಯನ್ನ ಆನೆಗಳ ಗುಂಪು ಹತ್ತಿರ ಸೇರಿಸಲ್ಲ. ನೀರು ಕೊಟ್ಟಿ,ಮರಿ ಆನೆಯನ್ನ ಅರಣ್ಯ ಅಧಿಕಾರಿಗಳು ಸಂತೈಸಿದ್ದಾರೆ. ಆನೆಯನ್ನು ಅದರ ಅಮ್ಮ ಬಳಿ ಸೇರಿಸಲು ಅರಣ್ಯ ಅಧಿಕಾರಿಗಳ ಪರದಾಡುತ್ತಿದ್ದಾರೆ. ಮೂಡಿಗೆರೆ-ಸಕಲೇಶಪುರ ಗಡಿಯಲ್ಲಿ ಬೀಡುಬಿಟ್ಟಿರೋ ಕಾಡಾನೆಗಳ ತಂಡದ ಮರಿ ಇರಬಹುದು ಎಂದು ಅಧಿಕಾರಿಗಳಿಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು