4:15 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು