5:10 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು