4:32 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು