2:14 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು