2:12 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು