3:05 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು