3:57 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು