6:04 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಬಾಲಕಾರ್ಮಿಕರ ಪತ್ತೆಗೆ ಕಾರ್ಯಾಚರಣೆ: ಹೋಟೆಲ್, ಗ್ಯಾರೇಜ್, ಫ್ಯಾಕ್ಟರಿಗಳಿಗೆ ಹಠಾತ್ ದಾಳಿ

10/02/2022, 08:13

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com):ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತವಾಗಿಸಲು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅದರ ಅಂಗವಾಗಿ ಕಾರ್ಮಿಕ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್
ಸಮಿತಿಯನ್ನು ರಚಿಸಿಕೊಂಡು ಮಂಗಳೂರು ನಗರದ ಅಪಾರ್ಟ್‍ಮೆಂಟ್‍ಗಳು, ಹೋಟೆಲ್‍ಗಳು, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಿಗೆ ಫೆ.8ರ ಮಂಗಳವಾರ ಅನಿರೀಕ್ಷಿತ ದಾಳಿ ನಡೆಸಿ, ಪರಿಶೀಲಿಸಿದರು. ಈ ವೇಳೆ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು. 

ಸಹಾಯಕ ಕಾರ್ಮಿಕ ಆಯುಕ್ತ ಬಿ.ಇ. ಶಿವಕುಮಾರ್, ಕಾರ್ಮಿಕ ಅಧಿಕಾರಿ  ಅಮರೇಂದ್ರ, ಟಿ. ಕಾವೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಮೇರಿ ಪಿ ಡಯಾಸ್, ವೀರೆಂದ್ರ ಕುಂಬಾರ್ ಶ್ರೀನಿವಾಸ್, ಯೋಜನಾ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬಾಲಕಾರ್ಮಿಕರು ಕಂಡುಬಂದರೆ ಚೈಲ್ಡ್ ಲೈನ್-1098, ಕಾರ್ಮಿಕ ಇಲಾಖೆ ದೂ.ಸಂಖ್ಯೆ:0824-2435343, ಜಿಲ್ಲಾ ಕಾರ್ಮಿಕ ಯೋಜನಾ ಸಂಘ ದೂ.ಸಂಖ್ಯೆ: 2433131 ಸಂಖ್ಯೆಗಳಿಗೆ ಕರೆ ಮಾಡಿ ದೂರು  ನೀಡುವಂತೆ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು