11:51 PM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಬಾಲಕಾರ್ಮಿಕರ ಪತ್ತೆಗೆ ಕಾರ್ಯಾಚರಣೆ: ಹೋಟೆಲ್, ಗ್ಯಾರೇಜ್, ಫ್ಯಾಕ್ಟರಿಗಳಿಗೆ ಹಠಾತ್ ದಾಳಿ

10/02/2022, 08:13

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com):ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತವಾಗಿಸಲು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅದರ ಅಂಗವಾಗಿ ಕಾರ್ಮಿಕ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್
ಸಮಿತಿಯನ್ನು ರಚಿಸಿಕೊಂಡು ಮಂಗಳೂರು ನಗರದ ಅಪಾರ್ಟ್‍ಮೆಂಟ್‍ಗಳು, ಹೋಟೆಲ್‍ಗಳು, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಿಗೆ ಫೆ.8ರ ಮಂಗಳವಾರ ಅನಿರೀಕ್ಷಿತ ದಾಳಿ ನಡೆಸಿ, ಪರಿಶೀಲಿಸಿದರು. ಈ ವೇಳೆ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು. 

ಸಹಾಯಕ ಕಾರ್ಮಿಕ ಆಯುಕ್ತ ಬಿ.ಇ. ಶಿವಕುಮಾರ್, ಕಾರ್ಮಿಕ ಅಧಿಕಾರಿ  ಅಮರೇಂದ್ರ, ಟಿ. ಕಾವೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಮೇರಿ ಪಿ ಡಯಾಸ್, ವೀರೆಂದ್ರ ಕುಂಬಾರ್ ಶ್ರೀನಿವಾಸ್, ಯೋಜನಾ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬಾಲಕಾರ್ಮಿಕರು ಕಂಡುಬಂದರೆ ಚೈಲ್ಡ್ ಲೈನ್-1098, ಕಾರ್ಮಿಕ ಇಲಾಖೆ ದೂ.ಸಂಖ್ಯೆ:0824-2435343, ಜಿಲ್ಲಾ ಕಾರ್ಮಿಕ ಯೋಜನಾ ಸಂಘ ದೂ.ಸಂಖ್ಯೆ: 2433131 ಸಂಖ್ಯೆಗಳಿಗೆ ಕರೆ ಮಾಡಿ ದೂರು  ನೀಡುವಂತೆ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು