10:20 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಾಲಕಾರ್ಮಿಕರ ಪತ್ತೆಗೆ ಕಾರ್ಯಾಚರಣೆ: ಹೋಟೆಲ್, ಗ್ಯಾರೇಜ್, ಫ್ಯಾಕ್ಟರಿಗಳಿಗೆ ಹಠಾತ್ ದಾಳಿ

10/02/2022, 08:13

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com):ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತವಾಗಿಸಲು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅದರ ಅಂಗವಾಗಿ ಕಾರ್ಮಿಕ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್
ಸಮಿತಿಯನ್ನು ರಚಿಸಿಕೊಂಡು ಮಂಗಳೂರು ನಗರದ ಅಪಾರ್ಟ್‍ಮೆಂಟ್‍ಗಳು, ಹೋಟೆಲ್‍ಗಳು, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಿಗೆ ಫೆ.8ರ ಮಂಗಳವಾರ ಅನಿರೀಕ್ಷಿತ ದಾಳಿ ನಡೆಸಿ, ಪರಿಶೀಲಿಸಿದರು. ಈ ವೇಳೆ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು. 

ಸಹಾಯಕ ಕಾರ್ಮಿಕ ಆಯುಕ್ತ ಬಿ.ಇ. ಶಿವಕುಮಾರ್, ಕಾರ್ಮಿಕ ಅಧಿಕಾರಿ  ಅಮರೇಂದ್ರ, ಟಿ. ಕಾವೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಮೇರಿ ಪಿ ಡಯಾಸ್, ವೀರೆಂದ್ರ ಕುಂಬಾರ್ ಶ್ರೀನಿವಾಸ್, ಯೋಜನಾ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬಾಲಕಾರ್ಮಿಕರು ಕಂಡುಬಂದರೆ ಚೈಲ್ಡ್ ಲೈನ್-1098, ಕಾರ್ಮಿಕ ಇಲಾಖೆ ದೂ.ಸಂಖ್ಯೆ:0824-2435343, ಜಿಲ್ಲಾ ಕಾರ್ಮಿಕ ಯೋಜನಾ ಸಂಘ ದೂ.ಸಂಖ್ಯೆ: 2433131 ಸಂಖ್ಯೆಗಳಿಗೆ ಕರೆ ಮಾಡಿ ದೂರು  ನೀಡುವಂತೆ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು