8:56 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಾಳೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ; ಗ್ರಾಮಸ್ಥರ ತೀವ್ರ ಆಕ್ರೋಶ

25/08/2024, 14:09

*ದಲಿತ ಸಂಘಟನೆಗಳಿಂದ ಕವಲಂದೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಾಳೆ ತೋಟವೊಂದರಲ್ಲಿ ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ದಲಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.
ಗಟ್ಟವಾಡಿ ಗ್ರಾಮದ ಎಸ್.ಶಶಿಕಲಾ (38)ಮೃತ ಮಹಿಳೆಯಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದ ನಾಗರಾಜು ಎಂಬಾತನನ್ನು ಶಶಿಕಲಾ ವಿವಾಹವಾಗಿದ್ದರು. ಕೋವಿಡ್ ಸಂದರ್ಭದಲ್ಲಿ ನಾಗರಾಜು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅಂದಿನಿಂದ ಶಶಿಕಲಾ ತವರು ಮನೆಯಾದ ಗಟ್ಟವಾಡಿ ಗ್ರಾಮದಲ್ಲಿಯೇ ವಾಸವಾಗಿದ್ದರು.
ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿರುವ ಲೂನರ್ಸ್ ಕಾರ್ಖಾನೆಯಲ್ಲಿ ಶಶಿಕಲಾ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆ.23 ರಂದು ಕೆಲಸಕ್ಕೆ ತೆರಳಿದ ಶಶಿಕಲಾ ಮನೆಗೆ ಹಿಂದಿರುಗಿಲ್ಲ.
ರಾತ್ರಿ ಸಮಯದಲ್ಲಿ ಮೃತ ಮಹಿಳೆಯ ಅಣ್ಣನಿಗೆ ಗಟ್ಟವಾಡಿ ಗ್ರಾಮದ ನಂಜುಂಡಪ್ಪ ಉರುಫ್ ಸಿದ್ದಲಿಂಗಪ್ಪ ದೂರವಾಣಿ ಮೂಲಕ ಕರೆ ಮಾಡಿ, ನಮ್ಮ ಬಾಳೆ ತೋಟದಲ್ಲಿ ನಿನ್ನ ತಂಗಿ ನೇಣು ಹಾಕಿಕೊಂಡಿದ್ದಾಳೆ ಎಂದು ತಿಳಿಸಿ ಆರೋಪಿ ನಂಜುಂಡಪ್ಪ ಉರುಫ್ ಸಿದ್ದಲಿಂಗಪ್ಪ ಪರಾರಿಯಾಗಿದ್ದಾನೆ.


ಸ್ಥಳದಲ್ಲಿ ಕಬ್ಬಿಣದ ರಾಡು, ಹಾಸಿಗೆ, ಚಾಪೆ, ದಿಂಬು, ಮೊಬೈಲ್ ಗಳು ಪೊಲೀಸರಿಗೆ ದೊರೆತಿವೆ. ನನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ ಎಂದು ಸಹೋದರ ಮಹದೇವಯ್ಯ ಆರೋಪಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿ ಕವಲಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಳ್ಳಲು ಮೀನಮೇಷ ಎಣಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಅತ್ಯಾಚಾರವೆಸಗಿ ಕೊಲೆ ಮಾಡಿರುವ ಬಗ್ಗೆ ಆರೋಪಿಸಲಾದ ನಂಜುಂಡಪ್ಪನನ್ನು ಈ ಕೂಡಲೇ ಬಂಧಿಸಬೇಕು.
ರಾತ್ರಿಯ ಸಮಯದಲ್ಲಿ ಕೊಲೆಯ ಬಗ್ಗೆ ತಿಳಿಸಲು ಬಂದ ಗ್ರಾಮದ ಯುವಕರಿಗೆ ಪೊಲೀಸ್ ಸಿಬ್ಬಂದಿಯಾದ ವಿಜಯಕುಮಾರ್ ಬೆದರಿಸಿ ನಿರ್ಲಕ್ಷ್ಯ ವಹಿಸಿರುವ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐಗಳಾದ ಕೃಷ್ಣಕಾಂತಕೋಳಿ, ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು