1:29 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಾಳೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ; ಗ್ರಾಮಸ್ಥರ ತೀವ್ರ ಆಕ್ರೋಶ

25/08/2024, 14:09

*ದಲಿತ ಸಂಘಟನೆಗಳಿಂದ ಕವಲಂದೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಾಳೆ ತೋಟವೊಂದರಲ್ಲಿ ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ದಲಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.
ಗಟ್ಟವಾಡಿ ಗ್ರಾಮದ ಎಸ್.ಶಶಿಕಲಾ (38)ಮೃತ ಮಹಿಳೆಯಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದ ನಾಗರಾಜು ಎಂಬಾತನನ್ನು ಶಶಿಕಲಾ ವಿವಾಹವಾಗಿದ್ದರು. ಕೋವಿಡ್ ಸಂದರ್ಭದಲ್ಲಿ ನಾಗರಾಜು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅಂದಿನಿಂದ ಶಶಿಕಲಾ ತವರು ಮನೆಯಾದ ಗಟ್ಟವಾಡಿ ಗ್ರಾಮದಲ್ಲಿಯೇ ವಾಸವಾಗಿದ್ದರು.
ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿರುವ ಲೂನರ್ಸ್ ಕಾರ್ಖಾನೆಯಲ್ಲಿ ಶಶಿಕಲಾ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆ.23 ರಂದು ಕೆಲಸಕ್ಕೆ ತೆರಳಿದ ಶಶಿಕಲಾ ಮನೆಗೆ ಹಿಂದಿರುಗಿಲ್ಲ.
ರಾತ್ರಿ ಸಮಯದಲ್ಲಿ ಮೃತ ಮಹಿಳೆಯ ಅಣ್ಣನಿಗೆ ಗಟ್ಟವಾಡಿ ಗ್ರಾಮದ ನಂಜುಂಡಪ್ಪ ಉರುಫ್ ಸಿದ್ದಲಿಂಗಪ್ಪ ದೂರವಾಣಿ ಮೂಲಕ ಕರೆ ಮಾಡಿ, ನಮ್ಮ ಬಾಳೆ ತೋಟದಲ್ಲಿ ನಿನ್ನ ತಂಗಿ ನೇಣು ಹಾಕಿಕೊಂಡಿದ್ದಾಳೆ ಎಂದು ತಿಳಿಸಿ ಆರೋಪಿ ನಂಜುಂಡಪ್ಪ ಉರುಫ್ ಸಿದ್ದಲಿಂಗಪ್ಪ ಪರಾರಿಯಾಗಿದ್ದಾನೆ.


ಸ್ಥಳದಲ್ಲಿ ಕಬ್ಬಿಣದ ರಾಡು, ಹಾಸಿಗೆ, ಚಾಪೆ, ದಿಂಬು, ಮೊಬೈಲ್ ಗಳು ಪೊಲೀಸರಿಗೆ ದೊರೆತಿವೆ. ನನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ ಎಂದು ಸಹೋದರ ಮಹದೇವಯ್ಯ ಆರೋಪಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿ ಕವಲಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಳ್ಳಲು ಮೀನಮೇಷ ಎಣಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಅತ್ಯಾಚಾರವೆಸಗಿ ಕೊಲೆ ಮಾಡಿರುವ ಬಗ್ಗೆ ಆರೋಪಿಸಲಾದ ನಂಜುಂಡಪ್ಪನನ್ನು ಈ ಕೂಡಲೇ ಬಂಧಿಸಬೇಕು.
ರಾತ್ರಿಯ ಸಮಯದಲ್ಲಿ ಕೊಲೆಯ ಬಗ್ಗೆ ತಿಳಿಸಲು ಬಂದ ಗ್ರಾಮದ ಯುವಕರಿಗೆ ಪೊಲೀಸ್ ಸಿಬ್ಬಂದಿಯಾದ ವಿಜಯಕುಮಾರ್ ಬೆದರಿಸಿ ನಿರ್ಲಕ್ಷ್ಯ ವಹಿಸಿರುವ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐಗಳಾದ ಕೃಷ್ಣಕಾಂತಕೋಳಿ, ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು