6:14 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ: ಕೆಎಫ್ ಎಂಎ ಸಂಸ್ಥೆ ತೀವ್ರ ಸಂತಾಪ

02/01/2025, 23:11

ಬೆಂಗಳೂರು(reporterkarnataka.com): ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಗಂ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್ ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು. ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು. ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಅಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು