1:54 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ: ಕೆಎಫ್ ಎಂಎ ಸಂಸ್ಥೆ ತೀವ್ರ ಸಂತಾಪ

02/01/2025, 23:11

ಬೆಂಗಳೂರು(reporterkarnataka.com): ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಗಂ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್ ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು. ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು. ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಅಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು