7:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ: ಕೆಎಫ್ ಎಂಎ ಸಂಸ್ಥೆ ತೀವ್ರ ಸಂತಾಪ

02/01/2025, 23:11

ಬೆಂಗಳೂರು(reporterkarnataka.com): ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಗಂ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್ ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು. ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು. ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಅಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು