2:09 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಬಿ.ಬಿ. ಮಂಜುನಾಥ್, ಉಪಾಧ್ಯಕ್ಷೆಯಾಗಿ ಗೀತಾ ಆಯ್ಕೆ

28/07/2023, 18:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿ.ಬಿ.ಮಂಜುನಾಥ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.

ಉಪಾಧ್ಯಕ್ಷೆಯಾಗಿ ಕೆ.ಆರ್.ಗೀತಾ ಆಯ್ಕೆಯಾಗಿದ್ದಾರೆ. ಕೆಡಿಪಿ ಸದಸ್ಯ ಬಿ.ಎಂ.ಭರತ್ ಮಾತನಾಡಿ ‘ ಗ್ರಾಮದ ಏಳಿಗೆಗಾಗಿ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕೈಜೋಡಿಸಿದರೆ ಗ್ರಾಮಾಭಿವೃದ್ದಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ವ ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದರು.
ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ’ ಪಕ್ಷತೀತಾ ನೆಲೆಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಹಂತಹಂತವಾಗಿ ಕೈಗೊಂಡು ಗ್ರಾಮಾಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಅವರಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹಾಗೂ ಅಭಿಮಾನಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿ ಆರ್.ಹೇಮಂತ್ ರಾಜ್, ಪ್ರಭಾರಿ ಪಿಡಿಒ ಯತೀಶ್ ಕುಮಾರ್, ಬಿಜೆಪಿ ಹೋಬಳಿ ಘಟಕ ಅಧ್ಯಕ್ಷ ಎಂ.ಎಲ್.ವಿಜೇಂದ್ರ, ಶರಣ್, ಸದಸ್ಯರಾದ ಮನೋಜ್,ಪ್ರಕಾಶ್,ಶ್ವೇತಾ, ಜಯಶ್ರೀರಮೇಶ್, .ತಾ.ಪಂ.ಮಾಜಿ ಅಧ್ಯಕ್ಷೆ ಪ್ರಮೀಳ ಮಂಜಯ್ಯ, ಸುಂಕಸಾಲೆ ಗ್ರಾ.ಪಂ.ಮಾಜಿ ಅಧ್ಯಕ್ಷ ಡಿ.ವೈ. ಮಹೇಶ್, ಶಶಿಧರ್ ಜಾವಳಿ,ರಘುಪತಿ,ಬಿ.ಎಸ್.ಕಲ್ಲೇಶ್,ಟಿ.ಎಂ.ಗಜೇಂದ್ರ, ಶಾಮಣ್ಣ ಬಣಕಲ್,ಜಗದೀಶ್, ಸತೀಶ್ ಬಾಳೂರು,ಸಂಜಯ್ ಗೌಡ, ಜೈಪಾಲ್ ಬಿದರಹಳ್ಳಿ, ಮನೋಜ್,ಅಭಿಲಾಷ್,ಚಂದನ್ ಕಾಮತ್,ಪರೀಕ್ಷಿತ್ ಜಾವಳಿ, ವೇಣುಗೋಪಾಲ್ ಪೈ,ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು