7:38 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು

16/07/2024, 21:54

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ.
ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತು ಎಂಬವರ ಮೇಲ್ಫಾವಣಿ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.


ರಾತ್ರಿ ಮಲಗಿದ ವೇಳೆ ಕುಸಿದಿದ್ದರಿಂದ ಎದ್ದು ಹೊರ ಓಡಿ ಹೋಗಿದ್ದಾರೆ. ನಂತರ ನೋಡಿದಾಗ ಮನೆ ಮೇಲ್ಛಾವಣಿ ಸಂಪೂರ್ಣ ಬಿದ್ದಿದ್ದು ಗೋಡೆ ಕೂಡ ಬಿರುಕುಗೊಂಡಿದೆ.
ಸೀತು ಹಾಗೂ ಸೀತು ಅವರ ಗಂಡ ಬೆಳ್ಳಯ್ಯ, ಹೇಮಾವತಿ(ಸೊಸೆ) ಮಕ್ಕಳು ಮಲಗಿದ್ದ ವೇಳೆಯೆ ಘಟನೆ ನಡೆದಿದೆ.
ಹೆಂಚು ಹಾಗೂ ಕೆಲ ಸಾಮಾಗ್ರಿಗಳು ಹಾನಿಯಾಗಿದೆ.
ಘಟನೆ ನಡೆದ ಮೇಲೆ ಪಕ್ಕದ ಮನೆಗೆ ಹೋಗಿ ಉಳಿದಿದ್ದಾರೆ.
ಸ್ಥಳಕ್ಕೆ ಗುಡ್ಡೆತೋಟ ಗ್ರಾಮ ಪಂಚಾಯಿತಿ ಪಿಡಿಓ ಶೋಭಾ, ಗ್ರಾಮ ಪಂಚಾಯತಿ ಸದಸ್ಯರಾದ ಕೀರ್ತಿರಾಜ್, ಶೈಲಾ, ರವಿ, ರೇಖಾ ಹಾಗೂ ಗ್ರಾಮಸ್ಥರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು