10:45 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು

16/07/2024, 21:54

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ.
ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತು ಎಂಬವರ ಮೇಲ್ಫಾವಣಿ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.


ರಾತ್ರಿ ಮಲಗಿದ ವೇಳೆ ಕುಸಿದಿದ್ದರಿಂದ ಎದ್ದು ಹೊರ ಓಡಿ ಹೋಗಿದ್ದಾರೆ. ನಂತರ ನೋಡಿದಾಗ ಮನೆ ಮೇಲ್ಛಾವಣಿ ಸಂಪೂರ್ಣ ಬಿದ್ದಿದ್ದು ಗೋಡೆ ಕೂಡ ಬಿರುಕುಗೊಂಡಿದೆ.
ಸೀತು ಹಾಗೂ ಸೀತು ಅವರ ಗಂಡ ಬೆಳ್ಳಯ್ಯ, ಹೇಮಾವತಿ(ಸೊಸೆ) ಮಕ್ಕಳು ಮಲಗಿದ್ದ ವೇಳೆಯೆ ಘಟನೆ ನಡೆದಿದೆ.
ಹೆಂಚು ಹಾಗೂ ಕೆಲ ಸಾಮಾಗ್ರಿಗಳು ಹಾನಿಯಾಗಿದೆ.
ಘಟನೆ ನಡೆದ ಮೇಲೆ ಪಕ್ಕದ ಮನೆಗೆ ಹೋಗಿ ಉಳಿದಿದ್ದಾರೆ.
ಸ್ಥಳಕ್ಕೆ ಗುಡ್ಡೆತೋಟ ಗ್ರಾಮ ಪಂಚಾಯಿತಿ ಪಿಡಿಓ ಶೋಭಾ, ಗ್ರಾಮ ಪಂಚಾಯತಿ ಸದಸ್ಯರಾದ ಕೀರ್ತಿರಾಜ್, ಶೈಲಾ, ರವಿ, ರೇಖಾ ಹಾಗೂ ಗ್ರಾಮಸ್ಥರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು