1:09 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು

16/07/2024, 21:54

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ.
ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತು ಎಂಬವರ ಮೇಲ್ಫಾವಣಿ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.


ರಾತ್ರಿ ಮಲಗಿದ ವೇಳೆ ಕುಸಿದಿದ್ದರಿಂದ ಎದ್ದು ಹೊರ ಓಡಿ ಹೋಗಿದ್ದಾರೆ. ನಂತರ ನೋಡಿದಾಗ ಮನೆ ಮೇಲ್ಛಾವಣಿ ಸಂಪೂರ್ಣ ಬಿದ್ದಿದ್ದು ಗೋಡೆ ಕೂಡ ಬಿರುಕುಗೊಂಡಿದೆ.
ಸೀತು ಹಾಗೂ ಸೀತು ಅವರ ಗಂಡ ಬೆಳ್ಳಯ್ಯ, ಹೇಮಾವತಿ(ಸೊಸೆ) ಮಕ್ಕಳು ಮಲಗಿದ್ದ ವೇಳೆಯೆ ಘಟನೆ ನಡೆದಿದೆ.
ಹೆಂಚು ಹಾಗೂ ಕೆಲ ಸಾಮಾಗ್ರಿಗಳು ಹಾನಿಯಾಗಿದೆ.
ಘಟನೆ ನಡೆದ ಮೇಲೆ ಪಕ್ಕದ ಮನೆಗೆ ಹೋಗಿ ಉಳಿದಿದ್ದಾರೆ.
ಸ್ಥಳಕ್ಕೆ ಗುಡ್ಡೆತೋಟ ಗ್ರಾಮ ಪಂಚಾಯಿತಿ ಪಿಡಿಓ ಶೋಭಾ, ಗ್ರಾಮ ಪಂಚಾಯತಿ ಸದಸ್ಯರಾದ ಕೀರ್ತಿರಾಜ್, ಶೈಲಾ, ರವಿ, ರೇಖಾ ಹಾಗೂ ಗ್ರಾಮಸ್ಥರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು