2:04 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು

16/07/2024, 21:54

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ.
ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತು ಎಂಬವರ ಮೇಲ್ಫಾವಣಿ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.


ರಾತ್ರಿ ಮಲಗಿದ ವೇಳೆ ಕುಸಿದಿದ್ದರಿಂದ ಎದ್ದು ಹೊರ ಓಡಿ ಹೋಗಿದ್ದಾರೆ. ನಂತರ ನೋಡಿದಾಗ ಮನೆ ಮೇಲ್ಛಾವಣಿ ಸಂಪೂರ್ಣ ಬಿದ್ದಿದ್ದು ಗೋಡೆ ಕೂಡ ಬಿರುಕುಗೊಂಡಿದೆ.
ಸೀತು ಹಾಗೂ ಸೀತು ಅವರ ಗಂಡ ಬೆಳ್ಳಯ್ಯ, ಹೇಮಾವತಿ(ಸೊಸೆ) ಮಕ್ಕಳು ಮಲಗಿದ್ದ ವೇಳೆಯೆ ಘಟನೆ ನಡೆದಿದೆ.
ಹೆಂಚು ಹಾಗೂ ಕೆಲ ಸಾಮಾಗ್ರಿಗಳು ಹಾನಿಯಾಗಿದೆ.
ಘಟನೆ ನಡೆದ ಮೇಲೆ ಪಕ್ಕದ ಮನೆಗೆ ಹೋಗಿ ಉಳಿದಿದ್ದಾರೆ.
ಸ್ಥಳಕ್ಕೆ ಗುಡ್ಡೆತೋಟ ಗ್ರಾಮ ಪಂಚಾಯಿತಿ ಪಿಡಿಓ ಶೋಭಾ, ಗ್ರಾಮ ಪಂಚಾಯತಿ ಸದಸ್ಯರಾದ ಕೀರ್ತಿರಾಜ್, ಶೈಲಾ, ರವಿ, ರೇಖಾ ಹಾಗೂ ಗ್ರಾಮಸ್ಥರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು