5:53 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು