2:24 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು