5:06 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು