8:18 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು