9:38 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು