9:01 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು