12:52 PM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರವಾಹ; ಅಂಕೋಲಾ ಬಳಿ 50ಕ್ಕೂ ಹೆಚ್ಚು ಮನೆಗಳು ಜಲಾವೃತ, ಹಳಿ ತಪ್ಪಿದ ಮಂಗಳೂರು-ಮುಂಬೈ ರೈಲು

23/07/2021, 19:38

ಬೆಳಗಾವಿ/ಅಂಕೋಲಾ/ಹಾಸನ ಮಂಗಳೂರು(reporterkarnataka news) : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 5 ಜಿಲ್ಲೆ ಹಾಗೂ ಕರಾವಳಿಯ ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಶಿರಾಡಿ ಘಾಟಿ ಕುಸಿತದ ಬೆನ್ನಲ್ಲೇ ಚಾರ್ಮಾಡಿಯಲ್ಲಿ ಘಾಟಿ ಕುಸಿತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಗ್ರಾಮವೊಂದರಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಮಂಗಳೂರು- ಮುಂಬೈ ರೈಲು ಹಳಿ ತಪ್ಪಿದೆ.

ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು- ಮುಂಬಯಿ ರೈಲು ದೂದ್ ಸಾಗರ್ ಬಳಿ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಅಪಾಯ ಉಂಟಾಗಿಲ್ಲ. ಎಲ್ಲರನ್ನು ಬಸ್ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉತ್ತರ ಕನ್ನಡದ ಅಂಕೋಲಾ ಸಮೀಪದ ಹಿಚ್ಕಡ ಗ್ರಾಮದಲ್ಲಿ ಕನಿಷ್ಠ 50 ಮನೆಗಳು ಜಲಾವೃತವಾಗಿದೆ. ಹಲವು ಮನೆಗಳು ಸಂಪೂರ್ಣ ನಾಶವಾಗಿವೆ. ಸ್ಥಳೀಯರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು