11:35 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ

27/05/2021, 07:43

ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಐಎಂಎ ಪ್ರಧಾನಿ 

ನರೇಂದ್ರ ಮೋದಿ ಅವರಿಗೆ ಐಎಂಎ ಪತ್ರ ಬರೆದಿದೆ.

ಅಲೋಪಥಿ ಔಷಧಗಳನ್ನು ಪಡೆಯುತ್ತಿರುವ ಲಕ್ಷಾಂತರ ಜನರು ಮೃತಪಡುತ್ತಿದ್ದಾರೆ. ಕೋವಿಡ್ ಲಸಿಕೆ ಪಡೆದ 10,000 ವೈದ್ಯರು ಸಾವನ್ನಪ್ಪಿದ್ದಾರೆ ಎಂದು  ಬಾಬಾ ರಾಮ್ ದೇವ್ ಹೇಳಿಕೆ ನೀಡಿದ್ದರು. ಅಲೋಪಥಿ ವೈದ್ಯಕೀಯ ಪದ್ಧತಿ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ಕ್ಷಮೆಯಾಚಿಸಬೇಕು ಹಾಗೂ 1,000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಪಾವತಿಸಬೇಕು ಎಂದು ಐಎಂಎ ಉತ್ತರಾಖಂಡ ಘಟಕ ನೋಟಇಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಐಎಂಎ, ಕೋವಿಡ್ ಲಸಿಕೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ವಿರುದ್ಧ ಕೇಸ್ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು