1:00 AM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ

27/05/2021, 07:43

ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಐಎಂಎ ಪ್ರಧಾನಿ 

ನರೇಂದ್ರ ಮೋದಿ ಅವರಿಗೆ ಐಎಂಎ ಪತ್ರ ಬರೆದಿದೆ.

ಅಲೋಪಥಿ ಔಷಧಗಳನ್ನು ಪಡೆಯುತ್ತಿರುವ ಲಕ್ಷಾಂತರ ಜನರು ಮೃತಪಡುತ್ತಿದ್ದಾರೆ. ಕೋವಿಡ್ ಲಸಿಕೆ ಪಡೆದ 10,000 ವೈದ್ಯರು ಸಾವನ್ನಪ್ಪಿದ್ದಾರೆ ಎಂದು  ಬಾಬಾ ರಾಮ್ ದೇವ್ ಹೇಳಿಕೆ ನೀಡಿದ್ದರು. ಅಲೋಪಥಿ ವೈದ್ಯಕೀಯ ಪದ್ಧತಿ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ಕ್ಷಮೆಯಾಚಿಸಬೇಕು ಹಾಗೂ 1,000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಪಾವತಿಸಬೇಕು ಎಂದು ಐಎಂಎ ಉತ್ತರಾಖಂಡ ಘಟಕ ನೋಟಇಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಐಎಂಎ, ಕೋವಿಡ್ ಲಸಿಕೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ವಿರುದ್ಧ ಕೇಸ್ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು