7:45 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ: ಚಿತ್ರಾಪುರ ದೇಗುಲದ ಕಾಮಗಾರಿ ವೀಕ್ಷಣೆ

03/02/2023, 18:58

ಸುರತ್ಕಲ್(reporterkarnataka.com):
ಸುಮಾರು 20 ಲಕ್ಷ ರೂಪಾಯಿ ಅನುದಾನದಲ್ಲಿ ಬೈಕಂಪಾಡಿ ಮೊಗವೀರ ಮಹಾಸಭಾ (ರಿ) ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿ ಪ್ರಮುಖರೊಂದಿಗೆ ಸಮಾಲೋಚಿಸಿದರು.


ದೇವಳದಲ್ಲಿ ಚಿತ್ರಾಪುರ ಮಠಾಧೀಶರಾದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸ್ಥಳೀಯ ಕಾರ್ಪೊರೇಟರ್ ಸುಮಿತ್ರಾ, ಸುನಿತಾ, ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮುಖಂಡರಾದ ಅರವಿಂದ್ ಬೆಂಗ್ರೆ, ಬೂತ್ ಅಧ್ಯಕ್ಷರಾದ ಸುನಿತ್ ಚಿತ್ರಾಪುರ, ಶಕ್ತಿಕೇಂದ್ರ ಪ್ರಮುಖರಾದ ಗಿರೀಶ್ ಬೈಕಂಪಾಡಿ, ಬೈಕಂಪಾಡಿ ಮೋಗವೀರ ಮಹಾಸಭಾ ಅಧ್ಯಕ್ಷರಾದ ವಸಂತ ಬೈಕಂಪಾಡಿ, ಗುರಿಕಾರರು, ಪೂಜಾರಿಗಳು, ಆಡಳಿತ ಸಮಿತಿ ಸದಸ್ಯರು, ಅಂಗಸಂಸ್ಥೆಗಳು,ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು