8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ: ಚಿತ್ರಾಪುರ ದೇಗುಲದ ಕಾಮಗಾರಿ ವೀಕ್ಷಣೆ

03/02/2023, 18:58

ಸುರತ್ಕಲ್(reporterkarnataka.com):
ಸುಮಾರು 20 ಲಕ್ಷ ರೂಪಾಯಿ ಅನುದಾನದಲ್ಲಿ ಬೈಕಂಪಾಡಿ ಮೊಗವೀರ ಮಹಾಸಭಾ (ರಿ) ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿ ಪ್ರಮುಖರೊಂದಿಗೆ ಸಮಾಲೋಚಿಸಿದರು.


ದೇವಳದಲ್ಲಿ ಚಿತ್ರಾಪುರ ಮಠಾಧೀಶರಾದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸ್ಥಳೀಯ ಕಾರ್ಪೊರೇಟರ್ ಸುಮಿತ್ರಾ, ಸುನಿತಾ, ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮುಖಂಡರಾದ ಅರವಿಂದ್ ಬೆಂಗ್ರೆ, ಬೂತ್ ಅಧ್ಯಕ್ಷರಾದ ಸುನಿತ್ ಚಿತ್ರಾಪುರ, ಶಕ್ತಿಕೇಂದ್ರ ಪ್ರಮುಖರಾದ ಗಿರೀಶ್ ಬೈಕಂಪಾಡಿ, ಬೈಕಂಪಾಡಿ ಮೋಗವೀರ ಮಹಾಸಭಾ ಅಧ್ಯಕ್ಷರಾದ ವಸಂತ ಬೈಕಂಪಾಡಿ, ಗುರಿಕಾರರು, ಪೂಜಾರಿಗಳು, ಆಡಳಿತ ಸಮಿತಿ ಸದಸ್ಯರು, ಅಂಗಸಂಸ್ಥೆಗಳು,ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು