10:51 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬಡ ಮಹಿಳೆ ಸರಕಾರದ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಅಪಪ್ರಚಾರ: ಸತ್ಯಾಸತ್ಯತೆ ತಿಳಿಯಲು ಕುವೆ ಗ್ರಾಪಂ ಮುಖ್ಯಸ್ಥರ ಭೇಟಿ

12/05/2022, 23:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ತಲಗೂರು ಗ್ರಾಮದಲ್ಲಿ ಬಡ ಮಹಿಳೆಗೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರದಿಂದ ಯಾವುದೇ ಸರ್ಕಾರಿ ಸೌಲಭ್ಯ ಹಾಗೂ ನಿವೇಶನ ಒದಗಿಸಿ ಕೊಟ್ಟಿಲ್ಲವೆಂದು ಜಾಲತಾಣಗಳಲ್ಲಿ ಮರ್ಕಲ್ ಗ್ರಾಮದ ವ್ಯಕ್ತಿಯೊಬ್ಬರು ಅಪಪ್ರಚಾರ ಮಾಡಲಾಗಿತ್ತು  ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಯವರು ಸತ್ಯಾಸತ್ಯತೆಯನ್ನು ತಿಳಿಯಲು ಆ  ಕುಟುಂಬದ ಮನೆಗೆ ಭೇಟಿ ನೀಡಿದಾಗ ಸತ್ಯಾಂಶ ಹೊರಬಂದಿದೆ. 

ಗ್ರಾಮ ಪಂಚಾಯಿತಿಯಿಂದ ಈಗಾಗಲೇ ಅವರಿಗೆ ಮನೆ ಕಟ್ಟಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಕೂಡ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಮಾಡಿಕೊಟ್ಟಿದ್ದಾರೆ.

ಆದರೂ ಕೂಡ ಪ್ರಚಾರದ ಗೀಳಿಗಾಗಿ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿದೆ ಎನ್ನುವ ಆರೋಪ ಕೇಳಿ 
ಬಂದಿದೆ.ಗ್ರಾಮ ಪಂಚಾಯಿತಿಯಿಂದ ಅನುದಾನ ಮನೆ ಕಟ್ಟಲು ಬಿಡುಗಡೆಯಾಗಿದ್ದು ಈಗಿರುವ ಮನೆಯ ಮುಂಭಾಗದಲ್ಲಿ ಫೌಂಡೇಶನ್ ಕೂಡ ಹಾಕಲಾಗಿದೆ. ಗ್ರಾಮ ಪಂಚಾಯಿತಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಅಪಪ್ರಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕುವೆ ಗ್ರಾಮಪಂಚಾಯತಿ ವ್ಯಾಪ್ತಿಯ ಮುಖಂಡರು ಮಂಗಳವಾರ ಸಂಜೆ ರತ್ನಮ್ಮ ರವರ ಮನೆಗೆ ಭೇಟಿ ನೀಡಿ ಮನೆಯನ್ನು ಬೇಗ ಪೂರ್ಣಗೊಳಿಸಲು ತಿಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು