1:36 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಡ ಮಹಿಳೆ ಸರಕಾರದ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಅಪಪ್ರಚಾರ: ಸತ್ಯಾಸತ್ಯತೆ ತಿಳಿಯಲು ಕುವೆ ಗ್ರಾಪಂ ಮುಖ್ಯಸ್ಥರ ಭೇಟಿ

12/05/2022, 23:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ತಲಗೂರು ಗ್ರಾಮದಲ್ಲಿ ಬಡ ಮಹಿಳೆಗೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರದಿಂದ ಯಾವುದೇ ಸರ್ಕಾರಿ ಸೌಲಭ್ಯ ಹಾಗೂ ನಿವೇಶನ ಒದಗಿಸಿ ಕೊಟ್ಟಿಲ್ಲವೆಂದು ಜಾಲತಾಣಗಳಲ್ಲಿ ಮರ್ಕಲ್ ಗ್ರಾಮದ ವ್ಯಕ್ತಿಯೊಬ್ಬರು ಅಪಪ್ರಚಾರ ಮಾಡಲಾಗಿತ್ತು  ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಯವರು ಸತ್ಯಾಸತ್ಯತೆಯನ್ನು ತಿಳಿಯಲು ಆ  ಕುಟುಂಬದ ಮನೆಗೆ ಭೇಟಿ ನೀಡಿದಾಗ ಸತ್ಯಾಂಶ ಹೊರಬಂದಿದೆ. 

ಗ್ರಾಮ ಪಂಚಾಯಿತಿಯಿಂದ ಈಗಾಗಲೇ ಅವರಿಗೆ ಮನೆ ಕಟ್ಟಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಕೂಡ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಮಾಡಿಕೊಟ್ಟಿದ್ದಾರೆ.

ಆದರೂ ಕೂಡ ಪ್ರಚಾರದ ಗೀಳಿಗಾಗಿ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿದೆ ಎನ್ನುವ ಆರೋಪ ಕೇಳಿ 
ಬಂದಿದೆ.ಗ್ರಾಮ ಪಂಚಾಯಿತಿಯಿಂದ ಅನುದಾನ ಮನೆ ಕಟ್ಟಲು ಬಿಡುಗಡೆಯಾಗಿದ್ದು ಈಗಿರುವ ಮನೆಯ ಮುಂಭಾಗದಲ್ಲಿ ಫೌಂಡೇಶನ್ ಕೂಡ ಹಾಕಲಾಗಿದೆ. ಗ್ರಾಮ ಪಂಚಾಯಿತಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಅಪಪ್ರಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕುವೆ ಗ್ರಾಮಪಂಚಾಯತಿ ವ್ಯಾಪ್ತಿಯ ಮುಖಂಡರು ಮಂಗಳವಾರ ಸಂಜೆ ರತ್ನಮ್ಮ ರವರ ಮನೆಗೆ ಭೇಟಿ ನೀಡಿ ಮನೆಯನ್ನು ಬೇಗ ಪೂರ್ಣಗೊಳಿಸಲು ತಿಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು