3:01 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬಡ ಮಹಿಳೆ ಸರಕಾರದ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಅಪಪ್ರಚಾರ: ಸತ್ಯಾಸತ್ಯತೆ ತಿಳಿಯಲು ಕುವೆ ಗ್ರಾಪಂ ಮುಖ್ಯಸ್ಥರ ಭೇಟಿ

12/05/2022, 23:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ತಲಗೂರು ಗ್ರಾಮದಲ್ಲಿ ಬಡ ಮಹಿಳೆಗೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರದಿಂದ ಯಾವುದೇ ಸರ್ಕಾರಿ ಸೌಲಭ್ಯ ಹಾಗೂ ನಿವೇಶನ ಒದಗಿಸಿ ಕೊಟ್ಟಿಲ್ಲವೆಂದು ಜಾಲತಾಣಗಳಲ್ಲಿ ಮರ್ಕಲ್ ಗ್ರಾಮದ ವ್ಯಕ್ತಿಯೊಬ್ಬರು ಅಪಪ್ರಚಾರ ಮಾಡಲಾಗಿತ್ತು  ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಯವರು ಸತ್ಯಾಸತ್ಯತೆಯನ್ನು ತಿಳಿಯಲು ಆ  ಕುಟುಂಬದ ಮನೆಗೆ ಭೇಟಿ ನೀಡಿದಾಗ ಸತ್ಯಾಂಶ ಹೊರಬಂದಿದೆ. 

ಗ್ರಾಮ ಪಂಚಾಯಿತಿಯಿಂದ ಈಗಾಗಲೇ ಅವರಿಗೆ ಮನೆ ಕಟ್ಟಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಕೂಡ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಮಾಡಿಕೊಟ್ಟಿದ್ದಾರೆ.

ಆದರೂ ಕೂಡ ಪ್ರಚಾರದ ಗೀಳಿಗಾಗಿ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿದೆ ಎನ್ನುವ ಆರೋಪ ಕೇಳಿ 
ಬಂದಿದೆ.ಗ್ರಾಮ ಪಂಚಾಯಿತಿಯಿಂದ ಅನುದಾನ ಮನೆ ಕಟ್ಟಲು ಬಿಡುಗಡೆಯಾಗಿದ್ದು ಈಗಿರುವ ಮನೆಯ ಮುಂಭಾಗದಲ್ಲಿ ಫೌಂಡೇಶನ್ ಕೂಡ ಹಾಕಲಾಗಿದೆ. ಗ್ರಾಮ ಪಂಚಾಯಿತಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಅಪಪ್ರಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕುವೆ ಗ್ರಾಮಪಂಚಾಯತಿ ವ್ಯಾಪ್ತಿಯ ಮುಖಂಡರು ಮಂಗಳವಾರ ಸಂಜೆ ರತ್ನಮ್ಮ ರವರ ಮನೆಗೆ ಭೇಟಿ ನೀಡಿ ಮನೆಯನ್ನು ಬೇಗ ಪೂರ್ಣಗೊಳಿಸಲು ತಿಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು