3:21 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬಡಗ ಎಡಪದವು: ಕೃತಕ ನೆರೆಗೆ ಕಾರಣವಾದ ನೂತನ ಕಿರು ಸೇತುವೆ; ಶಾಸಕ ಡಾ. ಭರತ್ ಶೆಟ್ಟಿ ಪರಿಶೀಲನೆ

29/06/2024, 20:37

ಬಡಗಎಡಪದವು(reporterkarnataka.com): ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬೈತರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕವಾಗಿ ತೋಡಿನ‌ ನೀರು ಹಾದು ಹೋಗುವ ನೆಲಮಟ್ಟಕಿಂತಲೂ 3-4 ಅಡಿ ಎತ್ತರದಲ್ಲಿ ಅಭಿವೃದ್ಧಿ ಪಡಿಸಿರುವಂತಹ ಕಿರು ಸೇತುವೆಯು ಕಳೆದ ಹಲವಾರು ದಿನಗಳಿಂದ ಸುರಿದ ನೀರಿಗೆ ತಡೆಯಾಗಿ ಪರಿಸರದ ಮನೆ, ಕಟ್ಟಡ, ದೇವಸ್ಥಾನ, ಹತ್ತಾರು ಮನೆಗಳಿಗೆ ಸಂಪರ್ಕಿಸುವ ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ‌ ನೆರೆಯ ಪರಿಸ್ಥಿತಿ ಉಂಟಾಗಿ ‌ಜನ‌ಜೀವನ ಅಸ್ತವ್ಯಸ್ತವಾಗಿದ್ದು,ಸ್ಥಳೀಯರ ದೂರಿನ ಮೇರೆಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಾಮಗಾರಿ ಆರಂಭದಿಂದಲೂ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಲವಾರು ಬಾರಿ ದೂರು ನೀಡಿದರೂ ಪ್ರತಿಭಟಿಸಿದವರ ಮೇಲೆ ಎಫ್.ಐ.ಆರ್ ಹಾಕಿ ಕಾಮಗಾರಿ‌ ಮುಂದುವರಿಸಿರುವ ಬಗ್ಗೆ ಸ್ಥಳೀಯರು ಶಾಸಕರಲ್ಲಿ ದೂರಿದರು. ಸ್ಥಳೀಯರು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾಮಗಾರಿ ಮುಂದುವರಿಸಲು ಹಾಗೂ ಈಗ ಅಸಮರ್ಪಕವಾಗಿರುವ ಕಿರುಸೇತುವೆಯ ಬದಲಿಗೆ ನೀರು ನೈಸರ್ಗಿಕವಾಗಿ ಸರಾಗವಾಗಿ ಹರಿದು ಹೋಗುವಂತೆ ಹಾಗೂ ಪರಿಸರದ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಹಾಸ್, ಪಂಚಾಯತ್ ಸದಸ್ಯರಾದ ವಸಂತ್, ಸವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಕಾರ್ಯದರ್ಶಿ ಲಕ್ಷಣ್ ಸಫಳಿಗ, ಶಕ್ತಿಕೇಂದ್ರ ಪ್ರಮುಖ್ ತಾರನಾಥ ಸಫಳಿಗ, ಬೂತ್ ಅಧ್ಯಕ್ಷರಾದ ಉಮನಾಥ, ಶಿವಪ್ರಸಾದ್ ಶೆಟ್ಟಿ ಗ್ರಾಮಸ್ಥರಾದ ರಘವೀರ್, ಶ್ರೀನಿವಾಸ್ ಭಟ್, ಗ್ರಾಮಸ್ಥರು ಹಾಗೂ ದಿಲೀಪ್ ಬಿಲ್ಡ್ ಕಾನ್ ನ ಪ್ರಾಜೆಕ್ಟ್ ಹೆಡ್ ರಾಘವ ರಾವ್, ಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು