4:47 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಬಡಗ ಎಡಪದವು: ಕೃತಕ ನೆರೆಗೆ ಕಾರಣವಾದ ನೂತನ ಕಿರು ಸೇತುವೆ; ಶಾಸಕ ಡಾ. ಭರತ್ ಶೆಟ್ಟಿ ಪರಿಶೀಲನೆ

29/06/2024, 20:37

ಬಡಗಎಡಪದವು(reporterkarnataka.com): ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬೈತರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕವಾಗಿ ತೋಡಿನ‌ ನೀರು ಹಾದು ಹೋಗುವ ನೆಲಮಟ್ಟಕಿಂತಲೂ 3-4 ಅಡಿ ಎತ್ತರದಲ್ಲಿ ಅಭಿವೃದ್ಧಿ ಪಡಿಸಿರುವಂತಹ ಕಿರು ಸೇತುವೆಯು ಕಳೆದ ಹಲವಾರು ದಿನಗಳಿಂದ ಸುರಿದ ನೀರಿಗೆ ತಡೆಯಾಗಿ ಪರಿಸರದ ಮನೆ, ಕಟ್ಟಡ, ದೇವಸ್ಥಾನ, ಹತ್ತಾರು ಮನೆಗಳಿಗೆ ಸಂಪರ್ಕಿಸುವ ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ‌ ನೆರೆಯ ಪರಿಸ್ಥಿತಿ ಉಂಟಾಗಿ ‌ಜನ‌ಜೀವನ ಅಸ್ತವ್ಯಸ್ತವಾಗಿದ್ದು,ಸ್ಥಳೀಯರ ದೂರಿನ ಮೇರೆಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಾಮಗಾರಿ ಆರಂಭದಿಂದಲೂ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಲವಾರು ಬಾರಿ ದೂರು ನೀಡಿದರೂ ಪ್ರತಿಭಟಿಸಿದವರ ಮೇಲೆ ಎಫ್.ಐ.ಆರ್ ಹಾಕಿ ಕಾಮಗಾರಿ‌ ಮುಂದುವರಿಸಿರುವ ಬಗ್ಗೆ ಸ್ಥಳೀಯರು ಶಾಸಕರಲ್ಲಿ ದೂರಿದರು. ಸ್ಥಳೀಯರು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾಮಗಾರಿ ಮುಂದುವರಿಸಲು ಹಾಗೂ ಈಗ ಅಸಮರ್ಪಕವಾಗಿರುವ ಕಿರುಸೇತುವೆಯ ಬದಲಿಗೆ ನೀರು ನೈಸರ್ಗಿಕವಾಗಿ ಸರಾಗವಾಗಿ ಹರಿದು ಹೋಗುವಂತೆ ಹಾಗೂ ಪರಿಸರದ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಹಾಸ್, ಪಂಚಾಯತ್ ಸದಸ್ಯರಾದ ವಸಂತ್, ಸವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಕಾರ್ಯದರ್ಶಿ ಲಕ್ಷಣ್ ಸಫಳಿಗ, ಶಕ್ತಿಕೇಂದ್ರ ಪ್ರಮುಖ್ ತಾರನಾಥ ಸಫಳಿಗ, ಬೂತ್ ಅಧ್ಯಕ್ಷರಾದ ಉಮನಾಥ, ಶಿವಪ್ರಸಾದ್ ಶೆಟ್ಟಿ ಗ್ರಾಮಸ್ಥರಾದ ರಘವೀರ್, ಶ್ರೀನಿವಾಸ್ ಭಟ್, ಗ್ರಾಮಸ್ಥರು ಹಾಗೂ ದಿಲೀಪ್ ಬಿಲ್ಡ್ ಕಾನ್ ನ ಪ್ರಾಜೆಕ್ಟ್ ಹೆಡ್ ರಾಘವ ರಾವ್, ಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು