6:20 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬಡಗ ಎಡಪದವು: ಕೃತಕ ನೆರೆಗೆ ಕಾರಣವಾದ ನೂತನ ಕಿರು ಸೇತುವೆ; ಶಾಸಕ ಡಾ. ಭರತ್ ಶೆಟ್ಟಿ ಪರಿಶೀಲನೆ

29/06/2024, 20:37

ಬಡಗಎಡಪದವು(reporterkarnataka.com): ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬೈತರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕವಾಗಿ ತೋಡಿನ‌ ನೀರು ಹಾದು ಹೋಗುವ ನೆಲಮಟ್ಟಕಿಂತಲೂ 3-4 ಅಡಿ ಎತ್ತರದಲ್ಲಿ ಅಭಿವೃದ್ಧಿ ಪಡಿಸಿರುವಂತಹ ಕಿರು ಸೇತುವೆಯು ಕಳೆದ ಹಲವಾರು ದಿನಗಳಿಂದ ಸುರಿದ ನೀರಿಗೆ ತಡೆಯಾಗಿ ಪರಿಸರದ ಮನೆ, ಕಟ್ಟಡ, ದೇವಸ್ಥಾನ, ಹತ್ತಾರು ಮನೆಗಳಿಗೆ ಸಂಪರ್ಕಿಸುವ ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ‌ ನೆರೆಯ ಪರಿಸ್ಥಿತಿ ಉಂಟಾಗಿ ‌ಜನ‌ಜೀವನ ಅಸ್ತವ್ಯಸ್ತವಾಗಿದ್ದು,ಸ್ಥಳೀಯರ ದೂರಿನ ಮೇರೆಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಾಮಗಾರಿ ಆರಂಭದಿಂದಲೂ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಲವಾರು ಬಾರಿ ದೂರು ನೀಡಿದರೂ ಪ್ರತಿಭಟಿಸಿದವರ ಮೇಲೆ ಎಫ್.ಐ.ಆರ್ ಹಾಕಿ ಕಾಮಗಾರಿ‌ ಮುಂದುವರಿಸಿರುವ ಬಗ್ಗೆ ಸ್ಥಳೀಯರು ಶಾಸಕರಲ್ಲಿ ದೂರಿದರು. ಸ್ಥಳೀಯರು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾಮಗಾರಿ ಮುಂದುವರಿಸಲು ಹಾಗೂ ಈಗ ಅಸಮರ್ಪಕವಾಗಿರುವ ಕಿರುಸೇತುವೆಯ ಬದಲಿಗೆ ನೀರು ನೈಸರ್ಗಿಕವಾಗಿ ಸರಾಗವಾಗಿ ಹರಿದು ಹೋಗುವಂತೆ ಹಾಗೂ ಪರಿಸರದ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಹಾಸ್, ಪಂಚಾಯತ್ ಸದಸ್ಯರಾದ ವಸಂತ್, ಸವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಕಾರ್ಯದರ್ಶಿ ಲಕ್ಷಣ್ ಸಫಳಿಗ, ಶಕ್ತಿಕೇಂದ್ರ ಪ್ರಮುಖ್ ತಾರನಾಥ ಸಫಳಿಗ, ಬೂತ್ ಅಧ್ಯಕ್ಷರಾದ ಉಮನಾಥ, ಶಿವಪ್ರಸಾದ್ ಶೆಟ್ಟಿ ಗ್ರಾಮಸ್ಥರಾದ ರಘವೀರ್, ಶ್ರೀನಿವಾಸ್ ಭಟ್, ಗ್ರಾಮಸ್ಥರು ಹಾಗೂ ದಿಲೀಪ್ ಬಿಲ್ಡ್ ಕಾನ್ ನ ಪ್ರಾಜೆಕ್ಟ್ ಹೆಡ್ ರಾಘವ ರಾವ್, ಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು