12:06 AM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! 

17/05/2022, 10:13

ಬೆಂಗಳೂರು(reporterkarnataka.com):  ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್  ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬಡ ವರ್ಗದವರ ಹಸಿವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇಂದಿರಾ ಕ್ಯಾಂಟೀನ್ ಗೆ ಬರೋ ಸಂಖ್ಯೆ ಕಡಿಮೆಯಾಗಿದ್ದನ್ನೇ ನೇಪವಾಗಿಟ್ಟುಕೊಂಡು, ಸಿಬ್ಬ ಕಳ್ಳಾಟ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ದೊಡ್ಡ ಕರ್ಮಕಾಂಡ ಇದೀಗ ಬಯಲಾಗಿದೆ.

ಇಂದಿರಾ ಕ್ಯಾಂಟೀನ್ ತಿಂಡಿ, ಊಟಕ್ಕೆ ಜನರು ಬಾರದ ಕಾರಣ, ಕೆಲ ಕ್ಯಾಂಟೀನ್ ಸಿಬ್ಬಂದಿಗಳು, ಹೋಟೆಲ್ ಮಾಲೀಕರೊಂದಿಗೆ ಶಾಮೀಲಾಗಿ, ಇಂದಿರಾ ಕ್ಯಾಂಟೀನ್ ಊಟವನ್ನು ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ವಿಶ್ವನಾಥ ನಾಗೇನಹಳ್ಳಿಯ ವಾರ್ಡ್ ನಂ.22ರಲ್ಲಿ, ಹೆಬ್ಬಾಳ್ಳ ಪ್ಲೈಓವರ್, ಶಿವಾಜಿ ನಗರದ ವಾರ್ಡ್ ನಂ.92ರಲ್ಲಿ, ಡಾಲರ್ಸ್ ಕಾಲೋನಿ ಬಳಿಯ ರಾಧಾಕೃಷ್ಣ ದೇವಸ್ಥಾನದ ವಾರ್ಡ್ ನಂ.18ರಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೋಟೆಲ್ ಗೆ ಊಟ ಬೇಕು, ನಾವು ಬೇರೆ ಕಡೆ ಮಾರಿಕೊಳ್ಳುತ್ತೇವೆ ಅಂದ್ರೇ ಸಾಕು, ದಿನಾ ಬನ್ನಿ ಕೊಡ್ತೀವಿ ಎಂಬುದಾಗಿ ಕ್ಯಾಂಟೀನ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹೋಟೆಲ್ ನವರು ಕೇಳುವಷ್ಟು ತಿಂಡಿ, ಊಟ ನೀಡಲಾಗುತ್ತದೆ. ಒಂದು ವೇಳೆ ಗ್ರಾಹಕರು ಹೆಚ್ಚು ಬಂದ್ರು, ಹೋಟೆಲ್ ಗೆ ಕ್ಯಾಂಟೀನ್ ತಿಂಡಿ, ಊಟ ಸೇಲ್ ಮಾಡಿದ ಕಾರಣ, ಇಲ್ಲ ಎಂದು ಹೇಳಲಾಗುತ್ತಿದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನು, ಸಿಬ್ಬಂದಿಗಳು ಅಡ್ಡದಾರಿಯ ಮೂಲಕ ಹೋಟೆಲ್ ಗಳಿಗೆ, ಕೇಳಿದವರಿಗೆ ಮಾರಿಕೊಳ್ಳುತ್ತಿರೋ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು