6:12 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! 

17/05/2022, 10:13

ಬೆಂಗಳೂರು(reporterkarnataka.com):  ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್  ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬಡ ವರ್ಗದವರ ಹಸಿವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇಂದಿರಾ ಕ್ಯಾಂಟೀನ್ ಗೆ ಬರೋ ಸಂಖ್ಯೆ ಕಡಿಮೆಯಾಗಿದ್ದನ್ನೇ ನೇಪವಾಗಿಟ್ಟುಕೊಂಡು, ಸಿಬ್ಬ ಕಳ್ಳಾಟ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ದೊಡ್ಡ ಕರ್ಮಕಾಂಡ ಇದೀಗ ಬಯಲಾಗಿದೆ.

ಇಂದಿರಾ ಕ್ಯಾಂಟೀನ್ ತಿಂಡಿ, ಊಟಕ್ಕೆ ಜನರು ಬಾರದ ಕಾರಣ, ಕೆಲ ಕ್ಯಾಂಟೀನ್ ಸಿಬ್ಬಂದಿಗಳು, ಹೋಟೆಲ್ ಮಾಲೀಕರೊಂದಿಗೆ ಶಾಮೀಲಾಗಿ, ಇಂದಿರಾ ಕ್ಯಾಂಟೀನ್ ಊಟವನ್ನು ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ವಿಶ್ವನಾಥ ನಾಗೇನಹಳ್ಳಿಯ ವಾರ್ಡ್ ನಂ.22ರಲ್ಲಿ, ಹೆಬ್ಬಾಳ್ಳ ಪ್ಲೈಓವರ್, ಶಿವಾಜಿ ನಗರದ ವಾರ್ಡ್ ನಂ.92ರಲ್ಲಿ, ಡಾಲರ್ಸ್ ಕಾಲೋನಿ ಬಳಿಯ ರಾಧಾಕೃಷ್ಣ ದೇವಸ್ಥಾನದ ವಾರ್ಡ್ ನಂ.18ರಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೋಟೆಲ್ ಗೆ ಊಟ ಬೇಕು, ನಾವು ಬೇರೆ ಕಡೆ ಮಾರಿಕೊಳ್ಳುತ್ತೇವೆ ಅಂದ್ರೇ ಸಾಕು, ದಿನಾ ಬನ್ನಿ ಕೊಡ್ತೀವಿ ಎಂಬುದಾಗಿ ಕ್ಯಾಂಟೀನ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹೋಟೆಲ್ ನವರು ಕೇಳುವಷ್ಟು ತಿಂಡಿ, ಊಟ ನೀಡಲಾಗುತ್ತದೆ. ಒಂದು ವೇಳೆ ಗ್ರಾಹಕರು ಹೆಚ್ಚು ಬಂದ್ರು, ಹೋಟೆಲ್ ಗೆ ಕ್ಯಾಂಟೀನ್ ತಿಂಡಿ, ಊಟ ಸೇಲ್ ಮಾಡಿದ ಕಾರಣ, ಇಲ್ಲ ಎಂದು ಹೇಳಲಾಗುತ್ತಿದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನು, ಸಿಬ್ಬಂದಿಗಳು ಅಡ್ಡದಾರಿಯ ಮೂಲಕ ಹೋಟೆಲ್ ಗಳಿಗೆ, ಕೇಳಿದವರಿಗೆ ಮಾರಿಕೊಳ್ಳುತ್ತಿರೋ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು