11:34 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! 

17/05/2022, 10:13

ಬೆಂಗಳೂರು(reporterkarnataka.com):  ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್  ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬಡ ವರ್ಗದವರ ಹಸಿವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇಂದಿರಾ ಕ್ಯಾಂಟೀನ್ ಗೆ ಬರೋ ಸಂಖ್ಯೆ ಕಡಿಮೆಯಾಗಿದ್ದನ್ನೇ ನೇಪವಾಗಿಟ್ಟುಕೊಂಡು, ಸಿಬ್ಬ ಕಳ್ಳಾಟ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ದೊಡ್ಡ ಕರ್ಮಕಾಂಡ ಇದೀಗ ಬಯಲಾಗಿದೆ.

ಇಂದಿರಾ ಕ್ಯಾಂಟೀನ್ ತಿಂಡಿ, ಊಟಕ್ಕೆ ಜನರು ಬಾರದ ಕಾರಣ, ಕೆಲ ಕ್ಯಾಂಟೀನ್ ಸಿಬ್ಬಂದಿಗಳು, ಹೋಟೆಲ್ ಮಾಲೀಕರೊಂದಿಗೆ ಶಾಮೀಲಾಗಿ, ಇಂದಿರಾ ಕ್ಯಾಂಟೀನ್ ಊಟವನ್ನು ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ವಿಶ್ವನಾಥ ನಾಗೇನಹಳ್ಳಿಯ ವಾರ್ಡ್ ನಂ.22ರಲ್ಲಿ, ಹೆಬ್ಬಾಳ್ಳ ಪ್ಲೈಓವರ್, ಶಿವಾಜಿ ನಗರದ ವಾರ್ಡ್ ನಂ.92ರಲ್ಲಿ, ಡಾಲರ್ಸ್ ಕಾಲೋನಿ ಬಳಿಯ ರಾಧಾಕೃಷ್ಣ ದೇವಸ್ಥಾನದ ವಾರ್ಡ್ ನಂ.18ರಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೋಟೆಲ್ ಗೆ ಊಟ ಬೇಕು, ನಾವು ಬೇರೆ ಕಡೆ ಮಾರಿಕೊಳ್ಳುತ್ತೇವೆ ಅಂದ್ರೇ ಸಾಕು, ದಿನಾ ಬನ್ನಿ ಕೊಡ್ತೀವಿ ಎಂಬುದಾಗಿ ಕ್ಯಾಂಟೀನ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹೋಟೆಲ್ ನವರು ಕೇಳುವಷ್ಟು ತಿಂಡಿ, ಊಟ ನೀಡಲಾಗುತ್ತದೆ. ಒಂದು ವೇಳೆ ಗ್ರಾಹಕರು ಹೆಚ್ಚು ಬಂದ್ರು, ಹೋಟೆಲ್ ಗೆ ಕ್ಯಾಂಟೀನ್ ತಿಂಡಿ, ಊಟ ಸೇಲ್ ಮಾಡಿದ ಕಾರಣ, ಇಲ್ಲ ಎಂದು ಹೇಳಲಾಗುತ್ತಿದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನು, ಸಿಬ್ಬಂದಿಗಳು ಅಡ್ಡದಾರಿಯ ಮೂಲಕ ಹೋಟೆಲ್ ಗಳಿಗೆ, ಕೇಳಿದವರಿಗೆ ಮಾರಿಕೊಳ್ಳುತ್ತಿರೋ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು