6:44 AM Saturday6 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ

22/05/2021, 17:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ
info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ ಸೋಮನಾಥ ನಗರದಲ್ಲಿ ಗುರುವಾರದಂದು 40 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆಯ ಮುಖ್ಯ ಅಧಿಕಾರಿ ಹನುಮಂತಮ್ಮ ನಾಯಕ್ ಅವರು ಅಭಿನಂದನ್ ಸಂಸ್ಥೆಯು ಲಾಕ್ ಡೌನ್ ನಿಂದಾಗಿ ಕಂಗಾಲಾದ ಕುಟುಂಬಗಳಿಗೆ ನೀಡುತ್ತಿರುವುದು ಶ್ಲಾಘನೆಯ ಕಾರ್ಯವಾಗಿದ್ದು, ಈ ಸಂಸ್ಥೆಯ ಎಲ್ಲಾ ಕಾರ್ಯಗಳಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ, ಎಸ್ ಡಿಎಂ ಸಹಕಾರಿಯ ಪರಮೇಶ್ ಕೊಪ್ಪರದ್, ಕಾಳಪ್ಪ ಪುಟ್ಟಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ ಸ್ವಾಮಿ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಮಂಜುನಾಥ ಮಸ್ಕಿ, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು