11:02 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ

22/05/2021, 17:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ
info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ ಸೋಮನಾಥ ನಗರದಲ್ಲಿ ಗುರುವಾರದಂದು 40 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆಯ ಮುಖ್ಯ ಅಧಿಕಾರಿ ಹನುಮಂತಮ್ಮ ನಾಯಕ್ ಅವರು ಅಭಿನಂದನ್ ಸಂಸ್ಥೆಯು ಲಾಕ್ ಡೌನ್ ನಿಂದಾಗಿ ಕಂಗಾಲಾದ ಕುಟುಂಬಗಳಿಗೆ ನೀಡುತ್ತಿರುವುದು ಶ್ಲಾಘನೆಯ ಕಾರ್ಯವಾಗಿದ್ದು, ಈ ಸಂಸ್ಥೆಯ ಎಲ್ಲಾ ಕಾರ್ಯಗಳಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ, ಎಸ್ ಡಿಎಂ ಸಹಕಾರಿಯ ಪರಮೇಶ್ ಕೊಪ್ಪರದ್, ಕಾಳಪ್ಪ ಪುಟ್ಟಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ ಸ್ವಾಮಿ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಮಂಜುನಾಥ ಮಸ್ಕಿ, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು