11:11 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಬಡವರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಡವರ ಬಂಧು ಪದ್ಮರಾಜ್ ಆರ್: ಪುತ್ತೂರು ಶಾಸಕ ಅಶೋಕ್ ರೈ ಶ್ಲಾಘನೆ

01/04/2024, 17:59

ಪುತ್ತೂರು(reporterkarnataka.com): ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.


ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದು ಹೇಳಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. ಇತರ ಸಮಯದಲ್ಲೂ ಎಲ್ಲಾ ಪ್ರಾರ್ಥನಾ ಕೇಂದ್ರಗಳಿಗೆ ತೆರಳುವ ಸಂಪ್ರದಾಯ ಬೆಳೆಸಿಕೊಂಡವನು ನಾನು. ಈ ಚುನಾವಣೆಯ ಮೂಲಕ ಎಲ್ಲಾ ಜನರ ಸೇವೆ ಮಾಡುವ ಭಾಗ್ಯ ಸಿಗುವಂತಾಗಲಿ ಎಂದರು.
ಮಸೀದಿ ಸಮಿತಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ ಮಾತನಾಡಿ, ಉತ್ತಮ ಅಭ್ಯರ್ಥಿ ನಮಗೆ ಲಭಿಸಿದ್ದಾರೆ. ಜಾತಿ, ಮತ, ಬೇಧ ನೋಡದೇ ಅವರನ್ನು ಗೆಲ್ಲಿಸಿಕೊಡಬೇಕು ಎಂದರು.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಕಾರ್ಯದರ್ಶಿ ಯಕೂಬ್ ಖಾನ್, ನೂರುದ್ದೀನ್ ಸಾಲ್ಮಾರ, ಹಸನ್ ಹಾಜಿ, ಶಕೂರ್ ಹಾಜಿ, ಎಂ.ಎಸ್. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು